ಮುದ್ದು ವಿದ್ಯಾರ್ಥಿಗಳೇ, ನಿಮಗೆಲ್ಲರಿಗೂ ಗುಬ್ಬಚ್ಚಿಗಳ ಚಿಲಿಪಿಲಿ ಬ್ಲಾಗಿಗೆ ಹಾರ್ದಿಕ ಸ್ವಾಗತ! ಸುಸ್ವಾಗತ!!

Riddles - ಒಗಟು ಬಿಡಿಸೋ ಜಾಣ - OGATU BIDISO JAAN

ಭಾಷೆಯಲ್ಲಿ ಒಗಟಿನ ಮಹತ್ವ ಬಹಳಷ್ಟಿರುತ್ತದೆ. ಭಾಷೆಯನ್ನು ಸೌಂದರ್ಯಭರಿತವನ್ನಾಗಿಸಲು, ಮಾತಿನ ಶೈಲಿಯನ್ನು ಹೆಚ್ಚಿಸಿ ಕೇಳುಗರ ಲಕ್ಷ್ಯ ತನ್ನೆಡೆಗೆ ಎಳೆದುಕೊಳ್ಳಲು ಆಗಾಗ ಮಾತಿನಲ್ಲಿ ಒಗಟುಗಳು, ಗಾದೆಮಾತುಗಳು, ವಾಕಪ್ರಚಾರಗಳು, ಪಡೆನುಡಿಗಳನ್ನು ಬಳಸುತ್ತೇವೆ. ಇಲ್ಲಿ ಕೆಲವು ಜನಾನುರಾಗಿ ಪ್ರಸಿದ್ಧ ಒಗಟುಗಳ ಸಂಗ್ರಹ ಕೊಡಲಾಗಿದೆ. 



 ೧. ಗೂಡಿನಲ್ಲಿನ ಪಕ್ಷಿ ನಾಡೆಲ್ಲ ನೋಡುತ್ತದೆ- ಕಣ್ಣು

೨. ಕಾಸಿನ ಕುದುರೆಗೆ ಬಾಲದ ಲಗಾಮು- ಸೂಜಿ ದಾರ

೩. ಎಲೆ ಇಲ್ಲಸುಣ್ಣ ಇಲ್ಲಬಣ್ಣವಿಲ್ಲ ತುಟಿ ಕೆಂಪಗಾಗಿದೆಮಳೆಯಿಲ್ಲ , ಬೆಲೆಯಿಲ್ಲ , ಮೈ ಹಸಿರಾಗಿದೆ- ಗಿಳಿ

೪. ಮನೆಮನೆಗೆರಡು ಬಾಗಿಲುಬಾಗಿಲ ಮುಂದೆ , ಮುಚ್ಚಿದರೆ ಹಾನಿ ಇದೇನು?- ಮೂಗುಬಾಯಿ

೫. ಸುತ್ತ ಮುತ್ತ ಸುಣ್ಣದ ಗೋಡೆಎತ್ತ ನೋಡಿದರೂ ಬಾಗಿಲಿಲ್ಲ ಇದು ಏನು?- ಮೊಟ್ಟೆ

೬. ಅಂಗಳದಲ್ಲಿ ಹುಟ್ಟುವುದುಅಂಗಳದಲ್ಲಿ ಬೆಳೆಯುವುದುತನ್ನ ಮಕ್ಕಳ ಹಂಗಿಸಿ ಮಾತಾಡುವುದು ಇದು ಏನು?- ಕೋಳಿ

೭. ಇದ್ದಲು ನುಂಗುತ್ತ , ಗದ್ದಲ ಮಾಡುತ್ತಾಉದ್ದಕ್ಕೂ ಓಡುತ್ತಾ ಮುಂದಕ್ಕೆ ಸಾಗುವ ನಾನ್ಯಾರು?- ರೈಲು

೮. ಊಟಕ್ಕೆ ಕುಳಿತವರು ಹನ್ನೆರಡು ಜನರುಬಡಿಸುವವರು ಇಬ್ಬರುಒಬ್ಬನು ಒಬ್ಬರಿಗೆ ಬಡಿಸುವಸ್ಟರಲ್ಲಿ ಇನ್ನೊಬ್ಬನು ಹನ್ನೆರಡು ಜನಕ್ಕೂ ಬಡಿಸಿರುತ್ತಾನೆ- ಗಡಿಯಾರ

೯. ಹಸಿರು ಹಾವರಾಣಿತುಂಬಿದ ತತ್ರಾಣಿಹೇಳದಿದ್ದರೆ ನಿಮ್ಮ ದೇವರಾಣಿ- ಕಲ್ಲಂಗಡಿ ಹಣ್ಣು

೧೦. ಮೊಟ್ಟೆ ಒಡೆಯೋ ಹಾಗಿಲ್ಲ ಕೊಡ ಮುಳುಗಿಸೋ ಹಾಗಿಲ್ಲ ಬರಿ ಕೊಡೆ ತಗೊಂಡು ಬಾರೋ ಹಾಗಿಲ್ಲ-ತೆಂಗು

೧೨. ಕಡಿದರೆ ಕಚ್ಚೋಕೆ ಆಗೋಲ್ಲ , ಹಿಡದ್ರೆ ಮುಟ್ಟೋಕೆ ಸಿಗೋಲ್ಲ-ನೀರು

೧೩.ಒಂದು ರುಮಾಲು ನಮ್ಮಪ್ಪನೂ ಸುತ್ತಲಾರ.-ದಾರಿ

೧೪. ಅಬ್ಬಬ್ಬ ಹಬ್ಬ ಬಂತುಸಿಹಿಕಹಿ ಎರಡೂ ತಂತು.-ಯುಗಾದಿ

೧೫. ಹುಟ್ಟುತ್ತಲೇ ಹುಡುಗ ತಲೆಯಲ್ಲಿ ಟೋಪಿ ಹಾಕಿರುತ್ತೆ .-ಬದನೆಕಾಯಿ.

೧೬. ಸಾಗರ ಪುತ್ರ ,ಸಾರಿನ ಮಿತ್ರ.-ಉಪ್ಪು

೧೭. ಸಾವಿರಾರು ಹಕ್ಕಿಗಳುಒಂದೇ ಬಾರಿಗೆ ನೀರಿಗಿಳಿತವೆ.-ಅಕ್ಕಿ

೧೮. ಗುಡುಗುಗುಡುಗಿದರೆ ಸಾವಿರ ನಯನಗಳು ಅರಳುವುದು.-ನವಿಲು.

೧೯. ಕಣ್ಣಿಲ್ಲಕಾಲಿಲ್ಲ ,ಆದರು ಚಲಿಸುತಿದೆ ಯಾವುದು ಎಲ್ಲಿದೆ ಬಲ್ಲಿದನ ಹೇಳಿರಲ.-ನದಿ

೨೦. ಹಲ್ಲಿಲ್ಲದ ಹಕ್ಕಿಗೆ ಗೂಡು ತುಂಬ ಮರಿಗಳು.- ಕೋಳಿ

೨೧. ಮೋಟು ಗೋಡೆ ಮೇಲೆದೀಪ ಉರೀತಿದೆ.- ಮೂಗುಬೊಟ್ಟು

೨೨. ಹೊಂಚು ಹಾಕಿದ ದೆವ್ವಬೇಡ ಬೇಡ ಎಂದರೂ ಜೂತೆಯೇ ಬರುತ್ತೆ.-ನೆರಳು

೨೩. ಮರನು ಮರನೇರಿ ಮತ್ತೆ ಮರನೇರಿ ಬಸವನಾ ಕತ್ತೇರಿ ತಿರುಗುತ್ತಿದೆ-ಗಾಣ

೨೪. ಹೊಕ್ಕಿದ್ದು ಒಂದಾಗಿ ಹೊರಟಿದ್ದು ಅದು ನೂರಾಗಿ-ಶ್ಯಾವಿಗೆ

೨೫. ಮಣ್ಣು ಆಗಿದೆ ಕಲ್ಲು ಸಿಕ್ಕಿತುಕಲ್ಲು ಆಗಿದೆ ಬೆಳ್ಳಿ ಸಿಕ್ಕಿತುಬೆಳ್ಳಿ ಒಡೆದ ನೀರು ಸಿಕ್ಕಿತು-ತೆಂಗಿನಕಾಯಿ

೨೬. ಕತ್ತಲೆ ಮನೆಯಲಿ ಕಾಳವ್ವ ಕುಂತವ್ಳೆ ಕುಯ್ಯೋಮರ್ರೋ ಅಂತವಳೇ-ತಂಬೂರಿ

೨೭. ಹಾರಿದರೆ ಹನುಮಂತಕೂತರೆ ಮುನಿಕೂಗಿದರೆ ಕಾಡಿನ ಒಡೆಯ-ಕಪ್ಪೆ

೨೮. ಕೈಲಿದ್ದಾಗ ಗುದಿಸಾಡುತ್ತೇನೆಕೈ ಬಿಟ್ಟಾಗ ಗೊರಕೆ ಒಡೆಯುತ್ತೇನೆ-ಕಸಪೊರಕೆ

೨೯. ಗಿಡ ಕೊಡಲಾರದುಮರ ಬೆಳೆಸಲಾರದು ಅದಿಲ್ಲದೆ ಊಟ ಸೇರಲಾರದು-ಉಪ್ಪು

೩೦. ನೀರಿಲ್ಲದ ಸಮುದ್ರಜನರಿಲ್ಲದ ಪಟ್ಟಣಸಂಚಾರವಿಲ್ಲದ ಮಾರ್ಗಗಳು ಎಲ್ಲಿ?-ನಕ್ಷೆ

೩೧. ಒಬ್ಬನನ್ನು ಹಿಡಿದರೆ ಎಲ್ಲಾರ ಮರ್ಜಿಯು ಗೊತ್ತಾಗುತ್ತದೆ.- ಅನ್ನದ ಅಗುಳು.

೩೨. ಮೇಲೆ ನೋಡಿದರೆ ನಾನಾ ಬಣ್ಣಉಜ್ಜಿದರೆ ಒಂದೇ ಬಣ್ಣ.-ಸಾಬೂನು.

೩೩. ಒಂದು ಕೊಂಬಿನ ಗುಳಿ ಅದರ ತಲೆಯೆಲ್ಲಾ ಮುಳ್ಳು.-ಬದನೆಕಾಯಿ.

೩೪. ನಾನು ತುಳಿದೆ ಅದನ್ನಅದು ತುಳಿಯೆತು ನನ್ನನ್ನ.-ನೀರು

೩೫. ಕೊಳದ ಒಳಗೆ ಒಂದು ಮರ ಹುಟ್ಟಿ ,ಬೇರು ಇಲ್ಲ ,ನೀರು ಇಲ್ಲ.-ಎಣ್ಣೆ ದೀಪ.

೩೬. ಬಡ ಬಡ ಬಂದ ಅಂಗಿ ಕಳಚಿದ ,ಬಾವಿಯೊಳಗೆ ಬಿದ್ದ.-ಬಾಳೆ ಹಣ್ಣು.

೩೭. ನೋಡಿದರೆ ನೋಟಗಳು ,ನಕ್ಕರೆ ನಗುಗಳು ,ಒಡೆದರೆ ತುಂಡುಗಳು.-ಕನ್ನಡಿ

೩೮. ಅಕ್ಕ ಪಕ್ಕ ಚದುರಂಗ ,ಅದರ ಹೂವು ಪದುರಂಗ ಅದರ ಹೆಸರು ಅಯ್ಯಯ್ಯಪ್ಪ .ಇದು ಏನು?-ದತ್ತುರಿಯ ಮುಳ್ಳು.

೩೯. ವನದಲ್ಲಿ ಹುಟ್ಟಿ ,ವನದಲ್ಲಿ ಬೆಳೆದು ,ವನದಿಂದ ಹೊರಟು ವನಜಲೊನೆ ಶಿರಕ್ಕೆರುವರು.-ಕಮಲ.

೪೦. ಕಲ್ಲು ಕೋಳಿ ಕುಗುತ್ತದೆಮುಲ್ಲ ಚೂರಿ ಹಾಕುತ್ತಾನೆ.-ಗಿರಣಿ

೪೧. ಸಾವಿರ ತರುತ್ತೆ ಲಕ್ಷ ತರುತ್ತೆ ನೀರಿನಲ್ಲಿ ಹಾಕಿದರೆ ಸಾಯುತ್ತೆ.-ದುಡ್ಡು.

೪೨. ತಕ್ಕಡೀಲಿ ಇಟ್ಟು ಮಾರೋ ಹಾಗಿಲ್ಲಅದಿಲ್ಲದೆ ಹಬ್ಬ ಅಗೋ ಹಾಗಿಲ್ಲ.-ಸಗಣಿ.

೪೩. ಚರಚರ ಕೊಯ್ತದೆ ಕತ್ತಿ ಅಲ್ಲಮಿಣಿಮಿಣಿ ಮಿಂಚುತ್ತದೆ ಮಿಂಚಲ್ಲಪೆಟ್ಟಿಗೆಗೆ ತುಂಬ್ತದೆ ದಾಗಿನ ಅಲ್ಲ.- ಗರಗಸ.

೪೪. ಕಡ್ಲೆ ಕಾಳಷ್ಟು ಹಿಂಡಿ೩೨ ಮನೆ ಸಾರಿಸಿ ಬಚ್ಚಲ ಪಾಲು ಆಗುತ್ತೆ.-ಹಲ್ಲುಪುಡಿ.

೪೫. ಕರಿ ಗುಡ್ಡ-ಬಿಳಿ ನೀರು ಅದ್ರಾಗೆ ಕುಂತವಳೇ ಚಂಪರಾಣಿ.-ಗಡಿಗೆಮಜ್ಜಿಗೆ.

೪೬. ಕೆಂಪು ಕುದುರೆ ಮೇಲೆ ಒಬ್ಬ ಏರುತ್ತಾನೆಒಬ್ಬ ಇಳಿಯುತ್ತಾನೆ .-ರೊಟ್ಟಿದೋಸೆ

೪೭. ಕೆಂದ ಕುದುರೆ ,ಬಿಳಿ ತಡಿಕರೆ ಲಗಾಮುಅಣ್ಣ ಅತ್ತಾನೆತಮ್ಮ ಇಳಿತ್ತಾನೆ-ಬೆಂಕಿಸುಣ್ಣ ಹಚ್ಚಿದ ಹಂಚುಹೊಗೆರೊಟ್ಟಿ

೪೮. ಕಂಬ ಕಂಬದ ಮೇಲೆ ದಿಂಬದಿಂಬದ ಮೇಲೆ ಲಾಗಲೂಟೆಲಾಗಲೂಟೆ ಮೇಲೆ ಎರಡು ಹುಡ್ಗರು ಓಡ್ಯಾಡುತಾರೆ.-ಕಣ್ಣು.

೪೯. ಶತ್ತಗಿಂಡಿಶಾರಾಗಿಂಡಿನೀರಾಗಿ ಹಕ್ಕಿದರೆ ಮುಳುಗದು ಮುತ್ತಿನ ಗಿಂಡಿ.-ಬೆಣ್ಣೆ ಉಂಡೆ.

೫೦.ಕುತ್ತಿಗೆ ಇದೆ ತಲೆ ಇಲ್ಲತೋಳಿದೆ ಬೆರಳಿಲ್ಲದಡಾ ಇದೆಕಾಲಿಲ್ಲ.-ಅಂಗಿ.

೫೧. ಹಸಿರು ಗಿಡದ ಮೇಲೆ ಮೊಸರು ಚೆಲ್ಲಿದೆ-ಮಲ್ಲಿಗೆ

೫೨. ಅಂಗೈ ಅಗಲದ ರೊಟ್ಟಿಗೆ ಲೆಕ್ಕವಿಲ್ಲದಷ್ಟು ಉಪ್ಪಿನಕಾಯಿ-ಆಕಾಶನಕ್ಷತ್ರ

೫೩. ಸುಟ್ಟ ಹೆಣ ಮತ್ತೆ ಸುಡ್ತಾರೆ-ಇದ್ದಿಲು

೫೪. ಚಿನ್ನದ ಪೆಟ್ಟಿಗೆಯಲ್ಲಿ ಬೆಳ್ಳಿ ಲಿಂಗ- ಬಾಳೆ ಹಣ್ಣು

೫೫. ಅಂಗೈ ಕೊಟ್ಟರೆ ಮುಂಗೈನೂ ನುಂಗುತ್ತದೆ- ಬಳೆ

೫೬. ಒಂದು ಹಪ್ಪಳ ಊರಿಗೆಲ್ಲ ಊಟಚಂದ್ರ

೫೭. ಆಕಾಶದಲ್ಲಿ ಕೊಡಲಿಗಳು ತೇಲಾಡುತ್ತವೆ- ಹುಣಸೇಹಣ್ಣು

೫೮. ನೀಲಿ ಕೆರೆಯಲಿ ಬಿಳಿ ಮೀನು-ನಕ್ಷತ್ರ

೫೯. ಒಂದು ತೇಲುತ್ತೆ ,ಒಂದು ಮುಳುಗುತ್ತೆಒಂದು ಕರಗುತ್ತೆ.-ವಾರ,ತಿಂಗಳು,ವರ್ಷ

೬೦. ಬಾ ಅಂದರೆ ಬರೋಲ್ಲ , ಹೋಗು ಅಂದರೆ ಹೋಗೋಲ್ಲ-ಮಳೆ

೬೧. ನಾ ಇರುವಾಗ ಬರುತ್ತೆ , ನಾ ಹೋದ ಮೇಲೂ ಇರುತ್ತೆ-ಕೀರ್ತಿ

೬೨. ಬೆಳ್ಳಿ ಸಮುದ್ರದಲ್ಲಿ ಕಪ್ಪು ಸೂರ್ಯ-ಕಣ್ಣು

೬೩ ಅಕ್ಕನ ಮೇಲೆ ಛತ್ರಿ- ರೆಪ್ಪೆ

೬೪. ತಮ್ಮಂಗೆ ಮೂರು ಕಣ್ಣು ಅಮ್ಮಂಗೆ ಒಂದೇ ಕಣ್ಣು-ತೆಂಗಿನ ಕಾಯಿ

೬೫. ಅಕ್ಕ ಓದುತ್ತಾಳೆ ತಂಗಿ ನಡೀತ್ತಾಳೆ-ಕಣ್ಣು

೬೬.ಅಮ್ಮನ ಆಕಾಶವಾಣಿ ನಾನು-ಮಗು

೬೭. ಅಂಗಡಿಯಿಂದ ತರೋದು ಮುಂದಿಟ್ಟುಕೊಂಡು ಅಳೋದು-ಈರುಳ್ಳಿ

೬೮. ಅಂಗಣ್ಣ ಮಂಗಣ್ಣ ಅಂಗಿ ಬಿಚ್ಚಿಕೊಂಡು ನುಂಗಣ್ಣ- ಬಾಳೆಹಣ್ಣು

೬೯. ಗೂಡ್ನಲ್ಲಿರೋ ಜೋಡಿ ಪಕ್ಷಿ ಊರೆಲ್ಲ ನೋಡುತ್ತೆ-ಕಣ್ಣು

೭೦. ಒಂದು ಮಡಕೆಮಡಕೆಯೊಳಗೆಕುಡಿಕೆಕುಡಿಕೆಯಲ್ಲಿ ಸಾಗರ-ತೆಂಗಿನ ಕಾಯಿ

೭೧. ನೀನಿಲ್ಲದೆ ಊಟವಿಲ್ಲ- ಉಪ್ಪು

೭೨. ಬಿಳಿ ಸರದಾರನಿಗೆ ಕರಿ ಟೋಪಿ-ಬೆಂಕಿಕಡ್ಡಿ

೭೩. ಕಾಲಿಲ್ದ ಹುಡುಗಿಗೆ ಮಾರುದ್ದ ಕಡಿವಾಣ – ಸೂಜಿ

೭೪. ಮೂರು ಕಾಸಿನ ಕುದುರೆಗೆ ಮುನ್ನೂರು ರೂಪಾಯಿನ ಹಗ್ಗ-ಹೇನು ಕೂದಲು

೭೫. ಕೆಂಪು ಕುದುರೆಗೆ ಲಗಾಮುಓಬ್ಬ ಹತ್ತುತ್ತಾನೆ , ಇನ್ನೊಬ್ಬ ಇಳಿತಾನೇ-ಬೆಂಕಿ,ಬಾಣಲೆದೋಸೆ

೭೬ . ಒಂದು ಮನೆಗೆ ಒಂದೇ ತೊಲೆ-ತಲೆ

೭೭. ಕಂದ ಬಂದ ಕೊಂದ ತಂದ-ಶ್ರೀ ರಾಮ ಚಂದ್ರ

೭೮. ಕಲ್ಲಿಲ್ಲದ ಬೆಟ್ಟ ಮರಳಿಲ್ಲದ ಮರುಭೂಮಿ-ಭೂಪಟ

೭೯. ಚಿಕ್ಕಕ್ಕನಿಗೆ ಪುಕ್ಕುದ್ದ-ಸೌಟು

೮೦. ಎರಡು ಮನೆಗೆ ಒಂದೇ ದೂಲ-ಮೂಗು

೮೧. ನೀರಿರೋತಾವ ನಿಲ್ಲಲೇ ಕೋಣ-ಚಪ್ಪಲಿ

೮೨. ಹೋದ ನೆಂಟಬಂದ ದಾರಿ ಗೊತ್ತಿಲ್ಲ-ನೆರಳು

೮೩. ಮರದೊಳಗೆ ಮರ ಹುಟ್ಟಿ ಮರ ಚಕ್ರ ಕಾಯಾಗಿ ತಿನ್ನಬಾರದ ಹಣ್ಣು ಬಲು ರುಚಿ-ಮನುಷ್ಯನ ಹುಟ್ಟು ಮಗು

೮೪. ಕಲ್ಲರಳಿ ಹೂವಾಗಿಎಲ್ಲರಿಗೂ ಬೇಕಾಗಿಮಲ್ಲಿಕಾರ್ಜುನನ ಗುಡಿಗೆ ಬೆಳಕಾಗಿಬಲ್ಲವರು ಹೇಳಿ ಸುಣ್ಣ

೮೫. ಚಿಣಿಮಿನಿ ಎನ್ನುವ ಕೆರೆಚಿಂತಾಮಣಿ ಎನ್ನುವ ಹಕ್ಕಿಕೆರೆ ಬತ್ತಿದರೆ ಹಕ್ಕಿಗೆ ಮರಣ ದೀಪ

೮೬. ಹೋಗುತ್ತಾಬರುತ್ತಾ ಇರುವುದು ಎರಡು,ಹೋದ ಮೇಲೆ ಬರಲಾರವು ಎರಡು-ಸಿರಿತನ-ಬಡತನಪ್ರಾಣ -ಬಡತನ

೮೭. ಒಂದು ಹಸ್ತಕ್ಕೆ ನೂರೆಂಟು ಬೆರಳು-ಬಾಳೆಗೊನೆ

೮೮. ಎಲ್ಲರ ಮನೆ ಅಜ್ಜಿಗೆ ಮೈಯೆಲ್ಲಾ ಕಜ್ಜಿ ಜರಡಿ

೮೯. ಎಂದರೆ ತೆರಿತಾವಅಪ್ಪ ಎಂದರೆ ಮುಚ್ಚುತಾವ-ಬಾಯಿ

೯೦. ದಾಸ್ ಬುರುಡೆ ದೌಲಥ ಬುರುಡೆಲೋಕಕ್ಕೆಲ್ಲ ಎರಡೇ ಬುರುಡೆ-ಸೂರ್ಯ , ಚಂದ್ರ

೯೧. ಅಪ್ಪ ಆಕಾಶಕ್ಕೆ ಅವ್ವ ಪಾತಾಳಕ್ಕೆ ಮಗ ವ್ಯಾಪಾರಕ್ಕೆ ಮಗಳು ಮದುವೆಗೆ ಅಡಿಕೆ ಮರ

೯೨.ಹಾರಾಡುತ್ತಿದೆ ಗಾಳಿಪತವಲ್ಲ , ಬಣ್ಣ ಮೂರಿರುವುದು ಕಾಮನಬಿಲ್ಲಲ್ಲ-ಧ್ವಜ

೯೩. ನೀಲಿ ಸಾಗರದಲ್ಲಿ ಬೆಳ್ಳನೆ ಮೀನುಗಳು ನಾನ್ಯಾರು?-ತಾರೆಗಳು

೯೪. ಬಿಡಿಸಿದರೆ ಹೂವುಮದಚಿದರೆ ಮೊಗ್ಗು ,ಇದು ಏನು?-ಛತ್ರಿ

೯೫. ಆರು ಕಾಲು ಅಂಕಣ್ಣ ಮೂರು ಕಾಲು ದೊಂಕಣ್ಣ ಸದಾ ಮೀಸೆ ತಿರುವಣ್ಣ-ನೊಣ

೯೬. ಒಂಟಿಕಾಲಿನ ಕುಂಟ. ನಾನ್ಯಾರು?-ಬುಗರಿ

೯೭. ಕಪ್ಪು ಕಂಬಳಿ ನೆಂಟ ಎಲ್ಲವನು ನಾಶ ಮಾಡೋಕೆ ಹೊಂಟ-ಇಲಿ

೯೮. ಹಲ್ಲು ಹಾಕಿದರೆ ಹಾಲು ಕೆಡೋಲ್ಲ ಕಲ್ಲು ಹಾಕಿದರೆ ಕೆಡುತ್ತೇ-ಕಳ್ಳಿ

೯೯. ಕಾಡಿನಲ್ಲಿ ಹುಟ್ಟುವುದು ಕಾಡಿನಲ್ಲಿ ಬೆಳೆಯುವುದು ಕಡಿದಲ್ಲಿ ಕಂಪ ಸೂಸುವೆನು-ಶ್ರೀಗಂಧ

೧೦೦. ಹಸಿರು ಕೋಟೆಬಿಳಿ ಕೋಟೆಕೆಂಪಿನ ಕೋಟೆ ಈ ಕೋಟೆಯೊಳಗೆ ಕಪ್ಪು ಸಿಪಾಯಿಗಳು-ಪರಂಗಿ ಹಣ್ಣು

೧೦೧.ಒಂದು ಮನೆಯಲ್ಲಿ ಮೂರು ಜನ ಅಕ್ಕ-ತಂಗಿಯರಿದ್ದಾರೆ ಆದರೆ ಒಬ್ಬರ ಮುಖ ಕಂಡರೆ ಒಬ್ಬರಿಗೆ ಕಾಣೋಲ್ಲ- ಜಾದಳಕಾಯಿ

೧೦೨. ಅಂಕಡೊಂಕಿನ ಬಾವಿ ಹೊಕ್ಕು ನೋಡಿದ್ರೆ ಮುಕ್ಕ ನೀರಿಲ್ಲ-ಕಿವಿ

೧೦೩. ಕೆಂಪು ಕುದುರೆ ಕರಿ ತಡಿ ಒಬ್ಬ ಏರುತಾನೆ ಒಬ್ಬ ಇಳಿತಾನೆ-ರೊಟ್ಟಿ

೧೦೪. ಮೂರೂ ಪಕ್ಷಿಗಳು ಗೂಡಿಗೆ ಹೋಗುವಾಗ ಬೇರೆ ಬೇರೆ ಬಣ್ಣ ಬರುವಾಗ ಬಣ್ಣ-ಎಲೆ ಅದಿಕೆ

೧೦೫. ಆಕಾಶದೊಳಗಿನ ಗಿಣಿ ಊಟದ ಹೊತ್ತಿಗೆ ರಾಣಿ-ಬಾಳೆಲೆ

೧೦೬. ಎರಡು ಬಾವಿಗಳ ನಡುವೆಯೊಂದು ಸೇತುವೆ-ಮೂಗು

೧೦೭. ತಲೆ ಇಲ್ಲ , ನಡು ಇಲ್ಲ , ಕೈಗಳಿದ್ದರು ಬೆರಳಿಲ್ಲ-ಕೋಟು ಅಂಗಿ

೧೦೮. ತಿಂಡಿಗೆ ಕಡಿಮೆ ಇಲ್ಲ ,ತೀರ್ಥ ಕುಡಿದರೆ ಸಾವು ವಿಷ

೧೦೯ . ಒಬ್ಬಳು ಮುಲುಗಿದಳುಒಬ್ಬಳು ಕರಗಿದಳು , ಒಬ್ಬಳು ತೇಲಿದಳು ಅಡಿಕೆ , ಸುಣ್ಣ

೧೧೦.ಹೋಗೋದು ಮುಳುಗೋದು ತರೋದು ಏನು?-ಬಿಂದಿಗೆ

೧೧೧. ಕಿರೀಟ ಇದೆ ರಾಜ ಅಲ್ಲಕಲ ತಿಳಿಸುತ್ತ್ತೆ ಗಡಿಯಾರವಲ್ಲ-ಕೋಳಿ

೧೧೨. ಒಂದು ಹಣ್ಣಿಗೆ ಹನ್ನೆರಡು ತೊಳೆ ಮತ್ತೂ ಮೂವತ್ತು ಬೀಜ-ವರ್ಷ

೧೧೩. ಗುಂಡಾಕಾರ ಮೈಯೆಲ್ಲಾ ತೂತು-ದೋಸೆ

೧೧೪.ಬಂಗಾರದ ಗುಬ್ಬಿ ಬಾಲದಲ್ಲೇ ನೀರನ್ನು ಕುಡಿಯುತ್ತೆ-ಚಿಮಿಣಿ

೧೧೫. ಒಂದು ಮರ , ಮರದಾಗ ಅಲ್ಲಅಲ್ಲಿನಾಗ ಕೊಬ್ರಿ ಗುಂಡ-ಆಕಾಶ ನಕ್ಷತ್ರ ಚಂದ್ರ

೧೧೬. ಅನ್ನ ಮಾಡಲಿಕ್ಕೆ ಬಾರದಂತಹ ಅಕ್ಕಿ ಯಾವುದು-ಏಲಕ್ಕಿ

೧೧೭. ಬೆಳ್ಳಿ ಬಟ್ಟಲಲ್ಲಿ ಮುತ್ತಿನ ಬಿಂದು-ತಾರೆ

೧೧೮. ಲಟಪಟ ಲೇಡಿಗೆ ಒಂದೇ ಕಣ್ಣು-ಸೂಜಿ

೧೧೯. ಹಸಿರು ಕೋಲಿಗೆ ಮುತ್ತಿನ ತುರಾಯಿ-ಜೋಳದ ತೆನೆ

೧೨೦. ಬಿಳಿ ಹುಲ್ಲಲ್ಲಿ ಕೆಂಪು ಕುರಿಮರಿ-ನಾಲಿಗೆ

೧೨೧. ಸೂಜಿ ಸಣ್ಣಕಾಗೆ ಬಣ್ಣ ಕೂದಲು

೧೨೨. ಹೋದರು ಇರುತ್ತೆ ಬಂದರೂ ಕಾಡುತ್ತೆ.ಇದು ಏನು?-ನೆನಪು

೧೨೩. ಆರು ಕಾಲಿನ ಆನೆಆನೆ ತಿನ್ನುತ್ತೆ ನೀರು ಕುಡಿಯಲ್ಲ-ನುಸಿ

೧೨೪. ಊರಿಗೆಲ್ಲ ಒಂದೇ ಕಂಬಳಿ-ಆಕಾಶ

೧೨೫. ಅಟ್ಟದ ಮೇಲೆ ಪುಟ್ಟ ಲಕ್ಷ್ಮಿ-ಕುಂಕುಮ

೧೨೬. ಕರಿ ಹೊಲದ ಮದ್ಯದಲ್ಲಿ ಬೇಲಿ ದಾರಿ-ಬೈತಲೆ

೧೨೭. ಒಂದು ಬತ್ತಿ ಮನೆಯೆಲ್ಲ ಬೆಳಕು-ಸೂರ್ಯ

೧೨೮.ಕಣ್ಣಿಗೆ ಕಾಣೋದಿಲ್ಲಕೈಗೆ ಸಿಗೋದಿಲ್ಲ ಗಾಳಿ

೧೨೯. ಕಣ್ಣಿಗೆ ಹತ್ತಿರ ಕಾಲಿಗೆ ದೂರ-ಬೆಟ್ಟ

೧೩೦. ಊಟಕ್ಕೆ ಮೊದಲು ನಾನು ಅಂತ ಬರುತ್ತೆ ಬಾಳೆ ಎಲೆ , ತಟ್ಟೆ

೧೩೧. ಹಸಿರು ಮೈ ಹಳದಿ ಮೈ ಪೇಟೇಲಿ ಕುಳಿತು ಎಲ್ಲರನ್ನು ಕರೆಯುತ್ತೆ-ಮಾವು

೧೩೨. ಹುಲಿಯ ಚಿಕ್ಕಮ್ಮ , ಇಲಿಯ ಮುಕ್ಕಮ್ಮ-ಬೆಕ್ಕು

೧೩೩. ಕೂಗಿದರೆ ರಾವಣಹಾರಿದರೆ ಹನುಮಂತಕೂತರೆ ಮುನಿ-ಕಪ್ಪೆ

೧೩೪. ಕಲ್ಲಲ್ಲಿ ಹುಟ್ಟುವುದುಕಲ್ಲಲ್ಲಿ ಬೆಳೆಯುವುದುನೆತ್ತಿಯಲ್ಲಿ ಕುತಗುಟ್ಟುವುದು-ಸುಣ್ಣ

೧೩೫. ಕಾಂತಾಮಣಿ ಎಂಬ ಪಕ್ಷಿಚಿಂತಾಮಣಿ ಎಂಬ ಕೆರೆಕೆರೆಯಲ್ಲಿ ನೀರಿಲ್ದೆ ಹೋದ್ರೆ ಪಕ್ಷಿಗೆ ಮರಣ-ದೀಪ

೧೩೬. ಕಲ್ಲು ತುಳಿಯುತ್ತೆಮುಳ್ಳು ಮೆಯುತ್ತೆನೀರು ಕಂಡ್ರೆ ನಿಲ್ಲುತ್ತೆ-ಚಪ್ಪಲಿ

೧೩೭. ಕಾಲಿಲ್ಲದೇ ನಡೆಯುವುದುತಲೆ ಎಲ್ಲಡೆ ನುಡಿಯುವುದುಮೇಲು ಕೆಳಗಾಗಿ ಓದುವುದು-ನದಿ

೧೩೮. ಜಂಬು ನೇರಳೆ ಮರಎಳೆದರೆ ನಾಲ್ಕು ಬಾವಿ ನೀರು ಒಂದೇ ಆಗುತ್ತದೆ-ಮೇಡು

೧೩೯. ಇಡೀ ಮನೆಗೆಲ್ಲ ಒಂದೇ ಕಂಬಳಿಬಾಯಿ ತೆರೆದರೆ ಮೂಗು ಮುಚ್ಚುತ್ತಿ-ಆಕಾಶ

೧೪೦. ಒಂದು ಕಾಲಿನ ಪಕ್ಷಿಗೆ ಒಂಭತ್ತು ರೆಕ್ಕೆಒಂದೇ ಕಾಲಲಿ ನಿಂತು ನೂರಾರು ಮೊಟ್ಟೆ ಇಡುತ್ತದೆ-ಜೋಳದ ದಂಟು

೧೪೧. ಎತ್ತ ಹೋದರು ಕುತ್ತಿಗೆಗೆ ಕೈ ಹಾಕುತ್ತಾರೆ! ನಾನ್ಯಾರು?-ಸಾಲಿಗ್ರಾಮ

೧೪೨. ಕರಿ ಹುಡುಗನಿಗೆ ಬಿಳಿ ಟೋಪಿ ಹೆಂಡದ ಮಡಿಕೆ

೧೪೩. ಬಿಳಿ ಆಕಾಶದಲ್ಲಿ ಕಪ್ಪು ನಕ್ಷತ್ರಗಳು,ಇದನ್ನು ನೋಡಲು ಜನ ಕಾದಿಹರು-ನಾಣ್ಯ

೧೪೪. ಗೋಡೆ ಗುದ್ದಪ್ಪ ನೀನಿದ್ದಲ್ಲಿ ನಿದ್ದೆ ಇಲ್ಲಪ್ಪ.-ತಿಗಣೆ

೧೪೫. ಕುದುರೆ ಬಾಲದಿಂದ ನೀರು ಕುಡಿಯುತ್ತದೆ-ಹೇನು

೧೪೬. ಬಿಳಿ ಸಾಮ್ರಾಜ್ಯದಲ್ಲಿ ಕಪ್ಪು ಪ್ರಜೆಗಳು.-ಸೀತ ಫಲ

೧೪೭. ಅಣ್ಣ ಅತ್ತರೆ ತಮ್ಮನೂ ಅಳುತ್ತಾನೆ.-ಕಣ್ಣು

೧೪೮. ಮನೆ ಮೇಲೆ ಮಲ್ಲಿಗೆ ಹೂವು.-ಮಂಜು

೧೪೯. ಹಾರಿದರೆ ಹನುಮಂತ ಕೂಗಿದರೆ ಶಂಖ.-ಕಪ್ಪೆ

೧೫೦. ನೋಡಿದರೆ ಕಲ್ಲು ನೀರು ಹಾಕಿದರೆ ಮಣ್ಣು.-ಸುಣ್ಣ

೧೫೧.ಸುದ್ದಿ ಸೂರಪ್ಪ ದೇಶವೆಲ್ಲಾ ಸುತ್ತಾಡ್ತಾನೆ.-ಪೋಸ್ಟ್ ಕಾರ್ಡ್

೧೫೨. ಬಿಳಿ ಕುದುರೆಗೆ ಹಸಿರು ಬಾಲ.-ಮೂಲಂಗಿ

೧೫೩. ಚಿಕ್ಕ ಬೆಟ್ಟದಲ್ಲಿ ಪುಟ್ಟ ಚಂದ್ರ.-ಕುಂಕುಮ

೧೫೪. ಬರೋದ ಕಂಡು ಕೈ ಒಡ್ತಾರೆ.-ಬಸ್

೧೫೫. ಹತ್ತಾರು ಮಕ್ಕಳ ತಂದೆ ಅದಕ್ಕೆ ತಲೆಯ ಮೇಲೆ ಜುಟ್ಟು-ಹುಂಜ

೧೫೬. ಹಸಿರು ಮುಖಕ್ಕೆ ವಿಪರೀತ ಕೋಪ , ಕೋಪ ಮಾಡಿಕೊಳ್ಳದೆ ನಾನ್ಯಾರೆಂದು ಹೇಳಿ?-ಮೆಣಸಿನಕಾಯಿ

೧೫೭. ಅಜ್ಜಿ ಗುದ್ದಿದರೆ ಮನೆಯೆಲ್ಲ ಮಕ್ಕಳು ಈಗ ಹೇಳಿ ನಾನ್ಯಾರು-ಬೆಳ್ಳುಳ್ಳಿ

೧೫೮. ಹಗಲಲ್ಲಿ ಮಾಯಾ ರಾತ್ರಿಯಲ್ಲಿ ಪ್ರತ್ಯಕ್ಷ ?ನಾನ್ಯಾರು ಹೇಳಿ?-ನಕ್ಷತ್ರ

೧೫೯.ಹಗ್ಗ ಹಾಸಿದೆ ಕೋಣ ಮಲಗಿದೆ-ಕುಂಬಳಕಾಯಿಬಳ್ಳಿ

೧೬೦. ನನ್ನ ಕಂಡರೆ ಎಲ್ಲರು ಓದೀತಾರೆ ಚೆಂಡು

೧೬೧. ಹಳ್ಳಿ ಗಡಿಯಾರಒಳ್ಳೆ ಆಹಾರ-ಕೋಳಿ

೧೬೨. ನೀರು ಇರುತ್ತೆ ನದಿ ಅಲ್ಲಬಾಗಿಲು ಇರುತ್ತೆ ಮನೆ ಅಲ್ಲ-ಕಣ್ಣು.

೧೬೩. ಬಲಗೈಯಲ್ಲಿ ಗೀತೆ ಎಡಗೈಯಲ್ಲಿ ರಾಟೆ ಹಿಡಿದಿದ್ದೆ ನಾನು ಯಾರು-ಗಾಂಧೀಜಿ

೧೬೪. ಬಾಯಲ್ಲಿ ಹಲ್ಲಿಲ್ಲಮಯಲ್ಲಿ ಶಕ್ತಿ ಇಲ್ಲ , ತಲೆಯಲ್ಲಿ ಕೂದಲಿಲ್ಲ , ಆದ್ರೂ ಎಲ್ರುನ್ನು ಕಾಡತಿನಿ ನಾನ್ಯಾರು.-ಸೊಳ್ಳೆ

೧೬೫. ಅಕ್ಷರಗಳಿದ್ದರೂ ಪುಸ್ತಕವಲ್ಲ,ಸಿಂಹವಿದ್ದರೂ ಅರಣ್ಯವಲ್ಲ,ದುಂಡಾಗಿದ್ದರೂ ಚಕ್ರವಲ್ಲ,ನಾನ್ಯಾರು.-ನಾಣ್ಯ

೧೬೬. ಗಂಟೆ ಹೊಡೆಯುತ್ತಾನೆ ಪೂಜಾರಿ ಅಲ್ಲ, PAPER ಅರಿಯುತ್ತಾನೆ ಆದರೆ ಹುಚ್ಚುನೂ ಅಲ್ಲಹಣ ಕೇಳುತ್ತಾನೆ ಭಿಕ್ಷುಕ ಅಲ್ಲ ಕಂಡಕ್ಟರ್

೧೬೯. ಹಿಡಿದರೆ ಹಿಡಿಯಷ್ಟು ಬಿಟ್ಟರೆ ಮನೆತುಂಬ-ದೀಪದ ಬೆಳಕು

೧೭೦. ಕಾಲಿಲ್ಲದೆ ನಡೆಯುವುದು ಬಾಯಿಲ್ಲದೆ ನುಡಿಯುವುದು ಇದರ ಹೊಟ್ಟೆ ಹಲವಕ್ಕೆ ಮನೆಯಾಗಿರುವುದು-ನದಿ

೧೭೧. ಚೋಟುದ್ದ ಹುಡುಗಿಗೆ ಮಾರುದ್ದ ಜಡೆ ಸೂಜಿ ದಾರ

೧೭೨. ಊರುಂಟು ಜನರಿಲ್ಲ ನದಿಯುಂಟು ನೀರಿಲ್ಲ ಭೂಪಟ.

೧೭೩. ಚಿಕ್ಕ ಬೋರನಿಗೆ ಬಾಲದಲ್ಲಿ ಕತ್ತಿ : ಹುರಳಿಕಾಯಿ

೧೭೪. ಬಿಳಿಯ ಹೊಲದಲ್ಲಿ ಕರಿ ಕಾಳು ಕೈಯಲ್ಲಿ ಬಿತ್ತುತ್ತಾರೆ ಬಾಯಲ್ಲಿ ಏತ್ತುತ್ತಾರೆ ನಾನು ಯಾರು : ಪುಸ್ತಕ ಮತ್ತು ಅಕ್ಷರಗಳು

೧೭೫. ಮೂರು ಕಡೆ ನೀರು ನೆತ್ತಿ ಮೇಲೆ ಬೆಟ್ಟ ಹಾಗಾದರೆ ನಾನು ಯಾರು? : ಭಾರತ

೧೭೬. ನಾಲ್ಕು ಕಂಬಗಳುಂಟು ದೇವಾಲಯವಲ್ಲಎರಡು ಮೊರಗಳುಂಟು ಕೇರಲಾಗುವುದಿಲ್ಲಒಂದು ಕಹಳೆಯುಂಟು ಊದಲಾಗುವುದಿಲ್ಲಹಾಗಾದರೆ ನಾನು ಯಾರು? : ಆನೆ

೧೭೭. ಮೂರು ಕಡೆ ನೀರು ನೆತ್ತಿ ಮೇಲೆ ಬೆಟ್ಟ ಹಾಗಾದರೆ ನಾನು ಯಾರು? : ಭಾರತ

೧೭೮. ಕರಿ ಕಂಬ್ಳಿ ನೆಂಟಸರೊತ್ತಿನಲ್ಲಿ ಹೊಂಟಅವನ್ಯಾರು? : ಹೆಗ್ಗಣ

೧೭೯. ರಾಮನಂತ ಸಮುದ್ರ ರತ್ನದಂತ ಮೀನು ನೀರು ಬತ್ತಿಹೋದ್ರೆ ಮೀನು ಸತ್ತು ಹೋಗುತ್ತೆ : ದೀಪ / ಹಣತೆ

೧೮೦. ಕಲ್ಲರಳಿ ಹೂವಾಗಿಎಲ್ಲರಿಗು ಬೇಕಾಗಿ,. ಮಲ್ಲಿಕಾರ್ಜುನನ ಶಿಖರಕ್ಕೆ ಬೆಳಕಾಗಿ. ಬಲ್ಲವರು ಹೇಳಿ 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು